ಬೆಂಗಳೂರಿನಲ್ಲಿ ಕಸದ ಸಮಸ್ಯೆ: ಕೆ.ಆರ್​​. ಮಾರ್ಕೆಟ್​​ನಲ್ಲಿ ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು

ಬೆಂಗಳೂರು, ಫೆಬ್ರವರಿ 19: ಅಭಿವೃದ್ಧಿ ಶುಲ್ಕದ ವಿಚಾರವಾಗಿ ಜಿಬಿಎ ಮತ್ತು ಗ್ರಾಮಸ್ಥರ ನಡುವೆ ಉಂಟಾಗಿರುವ ಭಿನ್ನಮತದಿಂದ ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ತಲೆದೂರಿದೆ. ಕೆ.ಆರ್. ಮಾರುಕಟ್ಟೆ ಬಳಿ 25-30ಕ್ಕೂ ಹೆಚ್ಚು ಆಟೋಗಳು ಮತ್ತು ಲಾರಿಗಳು ಕಸ ತುಂಬಿಕೊಂಡು ನಿಂತಲ್ಲೇ ನಿಂತಿವೆ. ನಿನ್ನೆಯಿಂದಲೂ ಇದೇ ಪರಿಸ್ಥಿತಿ ಮುಂದುವರಿದಿದೆ. ಬೆಂಗಳೂರಿನಿಂದ ಹೊರಟಿರುವ ಕಸ ತುಂಬಿದ ಲಾರಿಗಳನ್ನು ಬೆಳ್ಳಹಳ್ಳಿ ಮತ್ತು ದೊಡ್ಡಬಳ್ಳಾಪುರದಲ್ಲಿ ಡಂಪ್ ಮಾಡಲು ಗ್ರಾಮಸ್ಥರು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಅಡ್ಡಿಪಡಿಸುತ್ತಿದ್ದಾರೆ. ಗ್ರಾಮ ಪಂಚಾಯಿತಿಗಳಿಗೆ ಅಭಿವೃದ್ಧಿ ಶುಲ್ಕ ಬಿಡುಗಡೆ ಮಾಡಿಲ್ಲ ಎಂಬುದು ಅವರ ಆರೋಪ. ದೊಡ್ಡಬಳ್ಳಾಪುರದಲ್ಲಿ ಕಸವೂ ಬೇಡ, ಹಣವೂ ಬೇಡ ಎಂಬ ವಾದವಿದ್ದರೆ, ಇತರೆ ಡಂಪಿಂಗ್ ಯಾರ್ಡ್‌ಗಳಲ್ಲಿ ಶುಲ್ಕ ಹೆಚ್ಚಳಕ್ಕೆ ಬೇಡಿಕೆಯಿದೆ. ಹೀಗಾಗಿ ಕಸದ ಲಾರಿಗಳು ಡಂಪಿಂಗ್ ಯಾರ್ಡ್‌ಗಳ ಹೊರಗೆ ನಿಂತಿವೆ. ಇದರಿಂದಾಗಿ ಹೊಸ ಕಸ ಸಂಗ್ರಹಿಸಲು ಲಾರಿಗಳ ಕೊರತೆಯಾಗಿದ್ದು, ಪರಿಸರ ಕಲುಷಿತವಾಗುತ್ತಿದೆ.

Advertisement

Share this article

You cannot copy content of this page