ರಾಜ್ಯಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಮುಖ್ಯ ಆರೋಪಿ ಸೇರಿ 8 ಮಂದಿ ಬಂಧನ-Video

ಬಾಗಲಕೋಟೆ: ಶಿವಾಜಿ ಮಹಾರಾಜರ ಜಯಂತೋತ್ಸವ ಆಚರಣೆ ವೇಳೆ ನಡೆದ ಕಲ್ಲು ತೂರಾಟ, ಚಪ್ಪಲಿ ಎಸೆತ ಘಟನೆಗೆ ಸಂಬಂಧಿಸಿ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲೆ ಎಸ್ ಪಿ ಸಿದ್ಧಾರ್ಥ್ ಗೋಯೆಲ್ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳಿಗೆ ಘಟನೆ ಬಗ್ಗೆ ಮಾಹಿತಿ ನೀಡಿದ ಅವರು, ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಿ ಎಂಟು ಮಂದಿಯನ್ನು ಬಂಧಿಸಲಾಗಿದೆ. ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರ ಮೇಲೆ ಕಲ್ಲು ತೂರಾಟ ನಡೆದಿದ್ದು, ಎಸ್‌ಪಿ ಸೇರಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

Advertisement

ಬಂಧಿತರಲ್ಲಿ ಮುಖ್ಯ ಆರೋಪಿಯೂ ಸೇರಿದಂತೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಏಳು ಮಂದಿ ಸೇರಿದ್ದಾರೆ. ನಿಷೇಧಾಜ್ಞೆಯನ್ನು ಫೆಬ್ರವರಿ 24ರವರೆಗೆ ವಿಸ್ತರಿಸಲಾಗಿದ್ದು, ಹೆಚ್ಚುವರಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ತರಕಾರಿ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಾಧಾರಗಳ ಮೇಲೆ ಇನ್ನಷ್ಟು ಬಂಧನಗಳು ನಡೆಯಲಿವೆ ಎಂದರು.

Share this article

Subscribe

By pressing the Subscribe button, you confirm that you have read our Privacy Policy.
Advertisement

More News

You cannot copy content of this page