Video: ಹಿಮದಲ್ಲಿ ಸಿಲುಕಿದ್ದ ವಾಹನವನ್ನು ತಳ್ಳಲು ಸಹಾಯ ಮಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು

ನವದೆಹಲಿ, ಫೆಬ್ರವರಿ 18: ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರೀ ಹಿಮಪಾತ ಸಂಭವಿಸಿದೆ, ಹಿಮದಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ತಳ್ಳಲು ಕೇಂದ್ರ ಸಚಿವ ಕಿರಣ್ ರಿಜಿಜು ಸಹಾಯ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶೋಂಗಟ್ಸರ್ ಸರೋವರ ಮತ್ತು ಪಿಟಿ ತ್ಸೋ ಪ್ರದೇಶದ ನಡುವೆ ಈ ಘಟನೆ ನಡೆದಿದ್ದು, ಭಾರಿ ಹಿಮಪಾತವು ಪ್ರಮುಖ ರಸ್ತೆ ತಡೆಗೆ ಕಾರಣವಾಯಿತು. ಹಿಮದಿಂದ ಆವೃತವಾದ ರಸ್ತೆಯಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ಸ್ಥಳಾಂತರಿಸಲು ಮತ್ತು ದಾರಿಯನ್ನು ತೆರವುಗೊಳಿಸಲು ಸ್ಥಳೀಯರು ಮತ್ತು ಕಾರ್ಮಿಕರೊಂದಿಗೆ ತಾವು ಕೂಡ ಸೇರಿ ವಾಹನವನ್ನು ತಳ್ಳುತ್ತಿರುವುದನ್ನು ಕಾಣಬಹುದು. ಈ ವಿಡಿಯೋವನ್ನು ಖುದ್ದಾಗಿ ಅವರೇ ಹಂಚಿಕೊಂಡಿದ್ದಾರೆ.

Advertisement

Share this article

Subscribe

By pressing the Subscribe button, you confirm that you have read our Privacy Policy.
Advertisement

More News

You cannot copy content of this page