ನಟಿ ಪ್ರತ್ಯುಷಾ ಅನುಮಾನಾಸ್ಪದ ಸಾವು ಪ್ರಕರಣ: 4 ವಾರಗಳಲ್ಲಿ ಶರಣಾಗುವಂತೆ ಸಿದ್ದಾರ್ಥ್ ರೆಡ್ಡಿಗೆ ಸುಪ್ರೀಂ ಕೋರ್ಟ್ ಸೂಚನೆ; 24 ವರ್ಷಗಳ ಬಳಿಕ ಅಂತಿಮ ತೀರ್ಪು ಪ್ರಕಟ..!

ಹೈದರಾಬಾದ್: ಖ್ಯಾತ ನಟಿ ಪ್ರತ್ಯುಷಾ ಅನುಮಾನಾಸ್ಪದ ಸಾವು ಪ್ರಕರಣದ ಬಗ್ಗೆ 24 ವರ್ಷಗಳ ಬಳಿಕ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಿದೆ.

ಈ ಪ್ರಕರಣದಲ್ಲಿ ಆರೋಪಿಯಾಗಿರುವ ಸಿದ್ಧಾರ್ಥ್ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಫೆಬ್ರವರಿ 12) ವಜಾಗೊಳಿಸಿದ್ದು, 4 ವಾರಗಳಲ್ಲಿ ಪೊಲೀಸರಿಗೆ ಶರಣಾಗುವಂತೆ ಆದೇಶಿಸಿದೆ.

Advertisement

ಇದೇ ವೇಳೆ ಈ ಪ್ರಕರಣದ ಪೋಸ್ಟ್‌ಮಾರ್ಟಂ ಪ್ರಕ್ರಿಯೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಮರಣೋತ್ತರ ಪರೀಕ್ಷೆ ಸರಿಯಾದ ವಿಧಾನದಲ್ಲಿ ನಡೆಸಲಾಗಿಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಪ್ರಕರಣ ಸಂಬಂಧ ಈ ಹಿಂದೆ ಹೈಕೋರ್ಟ್ ಆರೋಪಿಗೆ ನೀಡಿದ್ದ ಶಿಕ್ಷೆಯನ್ನು ಇದೀಗ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಪ್ರತ್ಯೂಷಾ ಮತ್ತು ಸಿದ್ಧಾರ್ಥ ರೆಡ್ಡಿ ಹೈದರಾಬಾದ್‌ನಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದ ವೇಳೆ ಪ್ರೀತಿಯಲ್ಲಿ ಬಿದ್ದಿದ್ದರು. ಬಳಿಕ ಪ್ರತ್ಯುಷಾ ಸಿನಿರಂಗ ಪ್ರವೇಶಿಸಿದರೆ, ಸಿದ್ಧಾರ್ಥ ರೆಡ್ಡಿ ಇಂಜಿನಿಯರಿಂಗ್‌ಗೆ ಸೇರಿದ್ದರು.

Share this article

Subscribe

By pressing the Subscribe button, you confirm that you have read our Privacy Policy.
Advertisement

More News

You cannot copy content of this page