ದಕ್ಷಿಣ ಕನ್ನಡ : ಹಿಂದು ಸಾಮಾಜಿಕ ಕಾರ್ಯಕರ್ತ ನರಸಿಂಹ ಮಾಣಿ ಗಡಿಪಾರಿಗೆ ಜಿಲ್ಲೆಯ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.
ಗಡಿಪಾರು ಪ್ರಕ್ರಿಯೆಯನ್ನು ಹಿಂಪಡೆದ ಕೆಲವೇ ದಿನಗಳಲ್ಲಿ ಮತ್ತೆ ಆದೇಶ ಹೊರಡಿಸಿದ್ದಾರೆ.
ಆದೇಶ ಪತ್ರದಲ್ಲಿ ಉಲ್ಲೇಖಿಸಿದಂತೆ ನರಸಿಂಹ ಮಾಣಿ ತನ್ನ ಸಹಚರರೊಂದಿಗೆ ಸೇರಿಕೊಂಡು ಮಾಣಿ, ಕನ್ಯಾನ, ಪುತ್ತೂರು ಮುಂತಾದ ಸ್ಥಳಗಳಲ್ಲಿ ಕಾನೂನು ಬಾಹಿರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ದ್ವೇಷ ಭಾಷಣ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮುಂತಾದ ಹಲವಾರು ವಿಚಾರಗಳನ್ನು ಉಲ್ಲೇಖಿಸಲಾಗಿದೆ.











