ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 12 ಶನಿವಾರದಂದು ಉಪ್ಪಿನಂಗಡಿ ಹೋಬಳಿ ಮಟ್ಟದ “ಪ್ರಜಾ ಸೇವೆ ಆಂದೋಲನ” ಸಭೆಯು ಉಪ್ಪಿನಂಗಡಿ ಪಂಚಾಯತ್ ಸಭಾಭವನದಲ್ಲಿ ಬೆಳಿಗ್ಗೆ 11:00 ಗಂಟೆಗೆ ನಡೆಯಲಿದೆ.
ಈ ಸಭೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳು ಹಾಗೂ ಸಮಸ್ಯೆಗಳನ್ನು ಸಲ್ಲಿಸುವುದರ ಜೊತೆಗೆ, ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಪಡೆಯಲು ಅರ್ಜಿ ಸಲ್ಲಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಲಾಗಿದೆ.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸುವಂತೆ ಕೋರಿ ಶಾಸಕರು ಪ್ರಕಟಣೆಯ್ಲಲಿ ತಿಳಿಸಿದ್ದಾರೆ.











